11:49 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Bantwal | ಕಲ್ಲಡ್ಕ ಶಾರದೋತ್ಸವ: ವಿದುಷಿ ವಿದ್ಯಾ ಮನೋಜ್ ‘ಶಾಂತಶ್ರೀ’ ಪ್ರಶಸ್ತಿ; ವಿಜಯದಶಮಿ ದಿನ ಶೋಭಾಯಾತ್ರೆ

06/09/2025, 19:45

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಕಲ್ಲಡ್ಕದಲ್ಲಿ ನಡೆಯುವ ೪೮ನೇ ವರ್ಷದ ಶಾರದೋತ್ಸವವು ಸೆ.೨೮ ರಿಂದ ಅ.೨ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಈ ವರ್ಷದ ಕಲ್ಲಡ್ಕ ಶಾರದೋತ್ಸವದ ‘ಶಾಂತಶ್ರೀ’ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಅವರು ಆಯ್ಕೆಯಾಗಿದ್ದರೆ.
೪೪ ವರ್ಷ ಶಬರಿಮಲೆ ಯಾತ್ರೆ ಕೈಗೊಂಡ ಶತಾಯುಷಿಗಳಾದ ಕಮಲ ಗುರುಸ್ವಾಮಿ ಕುಂಟಿಪಾಪು ಮತ್ತು ಸ್ವಉದ್ಯಮದಲ್ಲಿ ಸಾಧನೆಗೈದ ಸಾಧಕಿ ನಾಗರತ್ನ ಪೂರ್ಲಿಪಾಡಿ ಅವರು ‘ಗ್ರಾಮಗೌರವ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸೆ.೨೮ ರಂದು ಕ್ರೀಡಾಕೂಟ ‘ಮಾರ್ನೆಮಿದ ಗೊಬ್ಬು’ ಶಿಶು, ಬಾಲ, ಪ್ರೌಢ, ತರುಣ, ಸಾರ್ವಜನಿಕ ಎಂಬ ಐದು ವಿಬಾಗಗಳಲ್ಲಿ ಜರಗಲಿದ್ದು, ಸೆ.೨೯ ರಂದು ವೇ.ಮೂ. ಪಳನೀರು ಶ್ರೀಪತಿ ಭಟ್ ಅವರ ಪೌರೋಹಿತ್ಯದಲ್ಲಿ ಶಾರದಾ ಮಾತೆಯ ಪ್ರತಿಷ್ಠಾಪನೆ ನೆರವೇರಲಿದೆ. ದುರ್ಗಾಹೋಮ, ಶಾರದೆಗೆ ರಂಗಪೂಜೆ, ಅಕ್ಷರಭ್ಯಾಸ, ಆಯುಧಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗಣ್ಯರ ಭಾಗವಹಿಸುವಿಕೆಯಲ್ಲಿ ಧಾರ್ಮಿಕ ಸಭೆ, ಪ್ರಶಸ್ತಿ ಪ್ರಧಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ನೌಕಸೇನೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭಿನಂದನೆ ಮಾಡಲಾಗುವುದು.
ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟಕ, ನೃತ್ಯರಂಜನಿ, ಗಾನ ನಾಟ್ಯ ಸಂಭ್ರಮ ನಡೆಯಲಿದೆ. ವಿಜಯದಶಮಿಯಂದು ಶೋಭಾಯಾತ್ರೆ ಯೊಂದಿಗೆ ಉತ್ಸವವು ಸಮಾಪನಗೊಳ್ಳಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು