ಇತ್ತೀಚಿನ ಸುದ್ದಿ
ಬಂಟ್ವಾಳ: ಲಾರಿ- ಸ್ಕೂಟರ್ ಡಿಕ್ಕಿ; ಸವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಸ್ಥಳದಲ್ಲೇ ಸಾವು
01/07/2025, 19:47

ಬಂಟ್ವಾಳ(reporterkarnataka.com): ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿ. ರೋಡಿನ ಅಜ್ಜಿಬೆಟ್ಟು ಕ್ರಾಸ್ನಲ್ಲಿ ನಡೆದಿದೆ.
ಸ್ಕೂಟರ್ ಸವಾರ ಚಿದಾನಂದ ಅವರು ಬಿ.ಸಿ. ರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ನಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಯಾಗಿದ್ದಾರೆ. ಅವರಿಗೆ ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಪತ್ನಿ ಶಂಭೂರು ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಿ. ಸಿ. ರೋಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.