2:10 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ

27/11/2022, 09:01

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜ್ ರಾಷ್ಟೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ತಾಲೂಕು ವಕೀಲರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಪ್ರಧಾನ ಸಿವಿಲ್ ನ್ಯಾಯಾದೀಶರಾದ ಚಂದ್ರಶೇಖರ ವೈ ತಳವಾರ,
ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊ ಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ, ಭಾರತಕ್ಕೆ ಸಂವಿಧಾನ ದೊಡ್ಡ ಬಲ ಎಂಬ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಜಿ ಆಗಮಿಸಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಸಿಸ್ಟರ್ ಲತಾ ಫೆರ್ನಾಂಡಿಸ್ ಎ ಸಿ , ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಸಹಾಯಕ ಅಭಿಯೋಜಕಿ ಹರಿಣಿ, ಬಂಟ್ವಾಳ ನಗರ ಪೊಲೀಸ್ ಠಾಠಾ ನೀರಿಕ್ಷಕರು ವಿವೇಕಾನಂದ ಉಪಸ್ಥಿತರಿದ್ದರು.

ಹಿರಿಯ ವಕೀಲ ಕೆ.ರಮೇಶ್ ಉಪಾಧ್ಯಾಯ ಸಂಪನ್ಮೂಲ ವ್ಯಕ್ತಿ ಯಾಗಿ ಅವರು ಮಾತನಾಡಿದರು.
ಅವರು ಮಾತನಾಡಿ ಭಾರತೀಯ ಸಂವಿಧಾನದ ಇತಿಹಾಸ ಅದರ ರುಪುರೇಷೆಗಳು, ಭಾರತೀಯ ಸಂವಿಧಾನದ ಹಕ್ಕುಗಳು, ಕರ್ತವ್ಯಗಳ ಅರಿವು ಪ್ರತಿಯೊಬ್ಬ ನಾಗರೀಕನಲ್ಲಿ ಇರಬೇಕು ಎಂಬ ಮಾಹಿತಿ ನೀಡಿದರು.

ಸುಪ್ರೀತ ನಿರೂಪಿಸಿದರು, ರಾಷ್ಟೀಯ ಸೇವಾ ಯೋಜನಾ ಘಟಕದ ಸಹ ಯೋಜನಾಧಿಕಾರಿ ವಿಜೇತ ಸ್ವಾಗತಿಸಿದರು, ಕಾಲೇಜಿನ ಮಾನವ ಹಕ್ಕು ಘಟಕದ ಸಂಯೋಜಕರು ನಿಹಾರಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು