12:12 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಭಾರೀ ಹೆಚ್ಚಳ: ತಗ್ಗು ಪ್ರದೇಶ ಮುಳುಗಡೆ; ಆಲಡ್ಕ ಪರಿಸರದಲ್ಲಿ ಮನೆಗಳು ಜಲಾವೃತ

19/07/2024, 21:23

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಯಿಂದ ಜಿಲ್ಲೆಯ ಹಲವೆಡೆ ತಗ್ಗು ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರು ತಾಲೂಕಿನ ಬಜಪೆ ಸಮೀಪದ ಅದ್ಯಪಾಡಿಯಲ್ಲಿ ನೆರೆ ನೀರು ನುಗ್ಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಆನಂದ ಹಾಗೂ ಹಿರಿಯ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು, ಆಲಡ್ಕ, ನಂದಾವರ, ಜಕ್ರಿಬೆಟ್ಟು, ಬ್ರಹ್ಮರಕೂಟ್ಲು ಪ್ರದೇಶದಲ್ಲಿ ಪ್ರವಾಹ ತಲೆದೋರಿದೆ.


ಬಂಟ್ವಾಳದಲ್ಲಿ ನೇತ್ರಾವತಿ ನದಿಯ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ, ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗಳು ಜಲಾವೃತಗೊಂಡಿವೆ.
ಸಂಗಬೆಟ್ಟು ಗ್ರಾಮದ ಪರನೀರು ಮನೆಯ ನಾಗೇಶ ಪೂಜಾರಿ
ಅವರ ವಾಸ್ತವ್ಯದ ಮನೆಯ ಸಮೀಪ ರೂಟ್ಟಿ ತಯಾರಿಕ ಕೊಠಡಿಗೆ ಮರ ಬಿದ್ದು ಹಾನಿ ಉಂಟಾಗಿದೆ. ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ರಾಘವ ಎಂಬವರಿಗೆ ಸೇರಿದ ಕೋಳಿ ಫಾರಂ ಸಂಪೂರ್ಣ ಹಾನಿಗೀಡಾಗಿದೆ. ಕೊಯಿಲಾ ಗ್ರಾಮದ ಅಂತರಾ ಎಂಬಲ್ಲಿ ಗ್ರಾಮ ಪಂಚಾಯತ್ ರಸ್ತೆಯ ಬದಿಯಲ್ಲಿರುವ ಗುಡ್ಡ ಕುಸಿದಿದೆ. ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಬಂಟ್ವಾಳ ಪರಿಸರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಆನಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು