1:52 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ

27/09/2022, 14:44

ಬಂಟ್ವಾಳ(reporterkarnataka.com):
ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ.

ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು. ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು