11:54 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Bantwal | ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ

25/10/2025, 17:35

ಬಂಟ್ವಾಳ(reporterkarnataka.com): ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ವಕೀಲರ ಸಂಘ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು.

ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಪಿ.ಜಯರಾಮ ರೈ ಅವರು ಪೋಸ್ಟ್ ಕಾರ್ಡ್ ಚಳಿವಳಿಗೆ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಹಾಗೂ ವಕೀಲರ ಸಂಘ (ರಿ), ಬಂಟ್ವಾಳ ಇದರ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ರವರು ಪೋಸ್ಟ್ ಕಾರ್ಡ್ ಚಳವಳಿಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಂಗಳೂರು, ಜಿಲ್ಲೆಗಳಿಗೆ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ರಚನೆಯಾಗ ಬೇಕೆಂದು ಎರಡು ದಶಕಗಳ ಹಿಂದೆ ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ. ಚಂಗಪ್ಪರವರ ನೇತೃತ್ವದಲ್ಲಿ ಹೋರಾಟ ಪ್ರಾರಂಭವಾಗಿತ್ತು. ಪ್ರಸ್ತುತ ಒಂದುವರೆ ವರ್ಷಗಳಿಂದ ಮಂಗಳೂರಿನ ಈಗಿನ ಅಧ್ಯಕ್ಷರಾದ ರಾಘವೇಂದ್ರ ರವರ ನೇತೃತ್ವದಲ್ಲಿ ಇದಕ್ಕೆ ಮತ್ತೆ ವೇಗ ಸಿಕ್ಕಿದೆ. ಅದರ ಮುಂದುವರಿದ ಹೋರಾಟದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಇಂದು ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಎಲ್ಲಾ ವಕೀಲರ ಸಂಘಗಳ ಸಹಯೋಗದಲ್ಲಿ ಏಕ ಕಾಲದಲ್ಲಿ ನಡೆಯುತ್ತಿದೆ.
ಹೈ ಕೋರ್ಟ್ ಪೀಠ ರಚನೆಗೆ ಮಂಗಳೂರಿನಲ್ಲಿ ಜಾಗ ಗುರುತಿಸಿದ್ದು, ಸರಕಾರ ಮತ್ತು ರಾಜ್ಯಪಾಲರಿಗೆ ಒತ್ತಾಯಿಸುವ ನಿಟ್ಟಿನಲ್ಲಿ ಅಭಿಯಾನ ಮತ್ತು ಹೋರಾಟಗಳು ಪ್ರಾರಂಭವಾಗಿದೆ. ಈ ಹೋರಾಟಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ, ಕಿರಿಯ ವಕೀಲ ಮಿತ್ರರು, ಸಾರ್ವಜನಿಕರು, ಪೋಸ್ಟ್ ಕಾರ್ಡ್ ಅಭಿಯಾನ ದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು