9:33 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Bantwal | ಧರ್ಮ ಎಲ್ಲರನ್ನೂ ಒಗ್ಗೂಡಿಸುತ್ತದೆ: ತುಂಬೆ ಫೆಸ್ಟ್- 2025 ಉದ್ಘಾಟಿಸಿ ಒಡಿಯೂರು ಶ್ರೀ

12/04/2025, 10:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸರ್ವ ಧರ್ಮವೂ ಶ್ರೇಷ್ಠ ವಾದುದು. ಅದು ಎಲ್ಲರನ್ನೂ ಒಗ್ಗೂಡಿಸುತ್ತದೆ. ಉತ್ಸವಗಳ ಉದ್ದೇಶ ಜನರಲ್ಲಿ‌ ಜಾಗೃತಿ ಮೂಡಿಸುವ ಕೆಲಸವಾಗಿದೆ. ದೇಶ ಬೆಳೆಯಬೇಕಾದರೆ ಪ್ರಜ್ಞಾವಂತ ಪ್ರಜೆಗಳು ‌ಅಭಿವೃದ್ಧಿಯಾಗಬೇಕು ಎಂದು ಒಡಿಯೂರು ಕ್ಷೇತ್ರದ‌ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆ ಬಳಿ‌ ತುಂಬೆ ಗ್ರೌಂಡ್ಸ್ ನಲ್ಲಿ ಏ.11ರಿಂದ‌ 13 ರವರೆಗೆ ನಡೆಯಲಿರುವ ತುಂಬೆ ಫೆಸ್ಟ್ -2025 ಕಾರ್ಯಕ್ರಮ ಉದ್ಘಾಟಿಸಿ‌ ಶುಭಹಾರೈಸಿ ಮಾತನಾಡಿದರು.


ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗಿರುಗಳಾದ ರೆ.ಫಾ. ವಲೇರಿಯನ್ ಡಿಸೋಜ ಮುಖ್ಯ‌ ಅತಿಥಿಯಾಗಿ ಮಾತನಾಡಿ ಭಾರತ ಮಾತೆಯ ಮಕ್ಕಳೆಲ್ಲಾ ಒಂದೇ ಎಂಬ ಭಾವನೆ ಬೆಳೆದು ಮಾನವೀಯತೆಯನ್ನು ರೂಢಿಸಿಕೊಳ್ಳಬೇಕೆಂದರು.
ಅಲ್ ಹಾಜ್‌ ಕೆ.ಪಿ.ಇರ್ಷಾದ್ ದಾರಿಮಿ ಮಿತ್ತಬೈಲ್ ಅತಿಥಿ ಯಾಗಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಚೆಂಡೆವಾದನದೊಂದಿಗೆ‌ ಸಭಾ ವೇದಿಕೆಗೆ ಸ್ವಾಗತಿಸಲಾಯಿತು.
ಫೆಸ್ಟ್ ಸಂಯೋಜಕರಾದ ಬಿ.ಎಂ.ಅಶ್ರಫ್, ತುಂಬೆ ‌ಬಿ.ಎ.ಗ್ರೂಪ್ ಎಂ.ಡಿ. ಬಿ.ಅಬ್ದುಲ್ ಸಲಾಂ, ಐಟಿಐ ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ್ ಕೆ.ಎಸ್‌., ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ಜಗದೀಶ ರೈ, ಸಾಯಿ ರಾಮ್ , ದಿನೇಶ್ ಶೆಟ್ಟಿ ಮೊದಲಾದವರಿದ್ದರು.
ಮೇಳದಲ್ಲಿ ಯೇನೆಪೋಯ ಮಹಿಳಾ ಆರೋಗ್ಯ ಸಂಚಾರಿ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ, ತೋಟಗಾರಿಕಾ ಇಲಾಖೆಯ ಯಂತ್ರೋಪಕರಣ ಪ್ರದರ್ಶನ, ಸಿರಿಧಾನ್ಯ ಮಾರಾಟ, ಸ್ತ್ರೀ ಶಕ್ತಿ ಸಂಘಟನೆಯ ವಿವಿಧ ಮಳಿಗೆಗಳು ಗಮನ ಸೆಳೆದವು. ಯೇನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು