10:41 AM Saturday12 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

Bantwal | ಧರ್ಮ ಎಲ್ಲರನ್ನೂ ಒಗ್ಗೂಡಿಸುತ್ತದೆ: ತುಂಬೆ ಫೆಸ್ಟ್- 2025 ಉದ್ಘಾಟಿಸಿ ಒಡಿಯೂರು ಶ್ರೀ

12/04/2025, 10:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಸರ್ವ ಧರ್ಮವೂ ಶ್ರೇಷ್ಠ ವಾದುದು. ಅದು ಎಲ್ಲರನ್ನೂ ಒಗ್ಗೂಡಿಸುತ್ತದೆ. ಉತ್ಸವಗಳ ಉದ್ದೇಶ ಜನರಲ್ಲಿ‌ ಜಾಗೃತಿ ಮೂಡಿಸುವ ಕೆಲಸವಾಗಿದೆ. ದೇಶ ಬೆಳೆಯಬೇಕಾದರೆ ಪ್ರಜ್ಞಾವಂತ ಪ್ರಜೆಗಳು ‌ಅಭಿವೃದ್ಧಿಯಾಗಬೇಕು ಎಂದು ಒಡಿಯೂರು ಕ್ಷೇತ್ರದ‌ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆ ಬಳಿ‌ ತುಂಬೆ ಗ್ರೌಂಡ್ಸ್ ನಲ್ಲಿ ಏ.11ರಿಂದ‌ 13 ರವರೆಗೆ ನಡೆಯಲಿರುವ ತುಂಬೆ ಫೆಸ್ಟ್ -2025 ಕಾರ್ಯಕ್ರಮ ಉದ್ಘಾಟಿಸಿ‌ ಶುಭಹಾರೈಸಿ ಮಾತನಾಡಿದರು.


ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗಿರುಗಳಾದ ರೆ.ಫಾ. ವಲೇರಿಯನ್ ಡಿಸೋಜ ಮುಖ್ಯ‌ ಅತಿಥಿಯಾಗಿ ಮಾತನಾಡಿ ಭಾರತ ಮಾತೆಯ ಮಕ್ಕಳೆಲ್ಲಾ ಒಂದೇ ಎಂಬ ಭಾವನೆ ಬೆಳೆದು ಮಾನವೀಯತೆಯನ್ನು ರೂಢಿಸಿಕೊಳ್ಳಬೇಕೆಂದರು.
ಅಲ್ ಹಾಜ್‌ ಕೆ.ಪಿ.ಇರ್ಷಾದ್ ದಾರಿಮಿ ಮಿತ್ತಬೈಲ್ ಅತಿಥಿ ಯಾಗಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಚೆಂಡೆವಾದನದೊಂದಿಗೆ‌ ಸಭಾ ವೇದಿಕೆಗೆ ಸ್ವಾಗತಿಸಲಾಯಿತು.
ಫೆಸ್ಟ್ ಸಂಯೋಜಕರಾದ ಬಿ.ಎಂ.ಅಶ್ರಫ್, ತುಂಬೆ ‌ಬಿ.ಎ.ಗ್ರೂಪ್ ಎಂ.ಡಿ. ಬಿ.ಅಬ್ದುಲ್ ಸಲಾಂ, ಐಟಿಐ ಕಾಲೇಜಿನ ಪ್ರಾಂಶುಪಾಲ ನವೀನ ಕುಮಾರ್ ಕೆ.ಎಸ್‌., ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ಜಗದೀಶ ರೈ, ಸಾಯಿ ರಾಮ್ , ದಿನೇಶ್ ಶೆಟ್ಟಿ ಮೊದಲಾದವರಿದ್ದರು.
ಮೇಳದಲ್ಲಿ ಯೇನೆಪೋಯ ಮಹಿಳಾ ಆರೋಗ್ಯ ಸಂಚಾರಿ ಆಸ್ಪತ್ರೆಯ ವತಿಯಿಂದ ಆರೋಗ್ಯ ತಪಾಸಣೆ, ತೋಟಗಾರಿಕಾ ಇಲಾಖೆಯ ಯಂತ್ರೋಪಕರಣ ಪ್ರದರ್ಶನ, ಸಿರಿಧಾನ್ಯ ಮಾರಾಟ, ಸ್ತ್ರೀ ಶಕ್ತಿ ಸಂಘಟನೆಯ ವಿವಿಧ ಮಳಿಗೆಗಳು ಗಮನ ಸೆಳೆದವು. ಯೇನೆಪೋಯ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು