11:49 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ 

12/06/2022, 14:59

ಬಂಟ್ವಾಳ(reporterkarnataka.com): ಕರ್ನಾಟಕ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟೀ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಿಡ ನೆಡುವ, ಗಿಡ ವಿತರಣೆ ಹಾಗೂ ಸ್ನೇಕ್ ಕಿರಣ್ ಅವರಿಂದ ಹಾವು ಮತ್ತು ನಾವು ಮಾಹಿತಿ ಕಾರ್ಯಕ್ರಮಗಳೂ  ನಡೆದವು. ಕಾಲೇಜು ಅಭಿವೃದ್ಧಿ ಸಮಿತಿ ಅದ್ಯಕ್ಷ ಪ್ರಸಾದ್ ಕುಮಾರ್ ರೈ  ಉದ್ಘಾಟಿಸಿ ಪರಿಸರ  ಸಂರಕ್ಷಣೆ ಮತ್ತು ಮಾನವ  ಅಸ್ತಿತ್ವದ ಮಹತ್ವ ವನ್ನು ವಿವರಿಸಿದರು. 


ತುಂಬೆ ವಿಭಾಗ ದ ಉಪ  ಅರಣ್ಯ ವಲಯಾಧಿಕಾರಿ ಯಶೋಧರ ಅವರು ಅರಣ್ಯ ಸಂರಕ್ಷಣೆಯ ಪ್ರಾಮುಖ್ಯತೆ ಬಗ್ಗೆ  ತಾಂತ್ರಿಕ ಮಾಹಿತಿ ನೀಡಿದರು. ಕಾಲೇಜಿನ  ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ  ಗಿಡ ನೆಡುವುದರ ಮಹತ್ವ ಪ್ರಕೃತಿ  – ಪರಿಸರ ಸಮತೋಲನದ  ಪ್ರಾಮುಖ್ಯತೆಯನ್ನು  ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ ಹೈದರಾಲಿ  ಸ್ವಾಗತಿಸಿದರು. ಡಾ. ಅಪರ್ಣ  ಆಳ್ವ ವಂದಿಸಿದರು. ಪ್ರೊ ಬಾಲ ಸುಬ್ರಮಣ್ಯ,ವಲಯ ಅರಣ್ಯ ಇಲಾಖೆಯ  ಜಿತೇಶ್, ರೇಖಾ ಹಾಗೂ ಭಾಸ್ಕರ್ ಕಾರ್ಯಕ್ರಮ ಆಯೋಜನೆಗೆ ಸಹಕರಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು