8:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ 

12/06/2022, 14:59

ಬಂಟ್ವಾಳ(reporterkarnataka.com): ಕರ್ನಾಟಕ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟೀ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಿಡ ನೆಡುವ, ಗಿಡ ವಿತರಣೆ ಹಾಗೂ ಸ್ನೇಕ್ ಕಿರಣ್ ಅವರಿಂದ ಹಾವು ಮತ್ತು ನಾವು ಮಾಹಿತಿ ಕಾರ್ಯಕ್ರಮಗಳೂ  ನಡೆದವು. ಕಾಲೇಜು ಅಭಿವೃದ್ಧಿ ಸಮಿತಿ ಅದ್ಯಕ್ಷ ಪ್ರಸಾದ್ ಕುಮಾರ್ ರೈ  ಉದ್ಘಾಟಿಸಿ ಪರಿಸರ  ಸಂರಕ್ಷಣೆ ಮತ್ತು ಮಾನವ  ಅಸ್ತಿತ್ವದ ಮಹತ್ವ ವನ್ನು ವಿವರಿಸಿದರು. 


ತುಂಬೆ ವಿಭಾಗ ದ ಉಪ  ಅರಣ್ಯ ವಲಯಾಧಿಕಾರಿ ಯಶೋಧರ ಅವರು ಅರಣ್ಯ ಸಂರಕ್ಷಣೆಯ ಪ್ರಾಮುಖ್ಯತೆ ಬಗ್ಗೆ  ತಾಂತ್ರಿಕ ಮಾಹಿತಿ ನೀಡಿದರು. ಕಾಲೇಜಿನ  ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ  ಗಿಡ ನೆಡುವುದರ ಮಹತ್ವ ಪ್ರಕೃತಿ  – ಪರಿಸರ ಸಮತೋಲನದ  ಪ್ರಾಮುಖ್ಯತೆಯನ್ನು  ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ ಹೈದರಾಲಿ  ಸ್ವಾಗತಿಸಿದರು. ಡಾ. ಅಪರ್ಣ  ಆಳ್ವ ವಂದಿಸಿದರು. ಪ್ರೊ ಬಾಲ ಸುಬ್ರಮಣ್ಯ,ವಲಯ ಅರಣ್ಯ ಇಲಾಖೆಯ  ಜಿತೇಶ್, ರೇಖಾ ಹಾಗೂ ಭಾಸ್ಕರ್ ಕಾರ್ಯಕ್ರಮ ಆಯೋಜನೆಗೆ ಸಹಕರಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು