12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಣಕಲ್‌ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು

07/07/2025, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು.
ಇದರೊಂದಿಗೆ ದಶಕಗಳಿಂದ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಕೆಲಸಗಾರರು ಹಾಗೂ ಪ್ರಯಾಣಿಕರಿಗೆ ನಿರಾಶ್ರಿತ ಸ್ಥಿತಿಗೆ ಅಂತ್ಯವಾಯಿತು. ಮಳೆಗಾಲದಲ್ಲಿ ಗಾಳಿ ಮತ್ತು ಮಳೆಯಿಂದ ರಕ್ಷಣೆಗಾಗಿ ಅಂಗಡಿಗಳ ಆಶ್ರಯ ಬೇಕಾಗುತ್ತಿದ್ದ ಸಂದರ್ಭಗಳಿಗೂ ತೆರೆಬಿದ್ದಂತಾಗಿದೆ.
ಶಾಸಕಿ ನಯನ ಮೋಟಮ್ಮ ಮಾತನಾಡಿ, “ಗ್ರಾಮದ ಜನತೆ ಹಲವು ವರ್ಷಗಳಿಂದ ತಂಗುದಾಣದ ಅಗತ್ಯವನ್ನು ಮುಂದಿಟ್ಟು ಬಂದಿದ್ದರು. ಈ ಸಂದರ್ಭದಲ್ಲಿ ತಂಗುದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ತಿಳಿಸಿದರು. ಜೊತೆಗೆ ಸಾರ್ವಜನಿಕರು ಸ್ಥಳದ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಹೊಣೆ ಹೊತ್ತುಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಝರಿನ್, ಉಪಾಧ್ಯಕ್ಷೆ ಬಿ.ಬಿ. ಲೀಲಾವತಿ, ಪಿಡಿಓ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ.ಅತೀಕ ಬಾನು, ಇರ್ಫಾನ್, ಸಿರಾಜ್,ವಿನಯ್, ಮಧು ಕುಮಾರ್, ಸ್ಥಳೀಯರಾದ ದಿಲ್ದಾರ್ ಬೇಗಂ, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಸುಬ್ರಮಣ್ಯ, ಕುಂಜಿಮೋಣು, ಪೋಲ್ಸನ್, ಶಿವರಾಮ್ ಶೆಟ್ಟಿ, ಅಜೀದ್, ಸಿದ್ದೀಕ್,ಗೋಪಾಲ ಚಾರ್, ವಿಕ್ರಂ ಗೌಡ, ಸತೀಶ್ ಗೌಡ, ಮೆಲ್ವಿನ್,ಉಮ್ಮಾರ್, ಹೊಸಕೆರೆ ರಮೇಶ್,ಸಬ್ಲಿ ದೇವರಾಜ್,ದೇವಪ್ಪ ಜನಪ್ರತಿನಿಧಿಗಳು,ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು