4:44 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಣಕಲ್‌ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು

07/07/2025, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು.
ಇದರೊಂದಿಗೆ ದಶಕಗಳಿಂದ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಕೆಲಸಗಾರರು ಹಾಗೂ ಪ್ರಯಾಣಿಕರಿಗೆ ನಿರಾಶ್ರಿತ ಸ್ಥಿತಿಗೆ ಅಂತ್ಯವಾಯಿತು. ಮಳೆಗಾಲದಲ್ಲಿ ಗಾಳಿ ಮತ್ತು ಮಳೆಯಿಂದ ರಕ್ಷಣೆಗಾಗಿ ಅಂಗಡಿಗಳ ಆಶ್ರಯ ಬೇಕಾಗುತ್ತಿದ್ದ ಸಂದರ್ಭಗಳಿಗೂ ತೆರೆಬಿದ್ದಂತಾಗಿದೆ.
ಶಾಸಕಿ ನಯನ ಮೋಟಮ್ಮ ಮಾತನಾಡಿ, “ಗ್ರಾಮದ ಜನತೆ ಹಲವು ವರ್ಷಗಳಿಂದ ತಂಗುದಾಣದ ಅಗತ್ಯವನ್ನು ಮುಂದಿಟ್ಟು ಬಂದಿದ್ದರು. ಈ ಸಂದರ್ಭದಲ್ಲಿ ತಂಗುದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ತಿಳಿಸಿದರು. ಜೊತೆಗೆ ಸಾರ್ವಜನಿಕರು ಸ್ಥಳದ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಹೊಣೆ ಹೊತ್ತುಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಝರಿನ್, ಉಪಾಧ್ಯಕ್ಷೆ ಬಿ.ಬಿ. ಲೀಲಾವತಿ, ಪಿಡಿಓ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ.ಅತೀಕ ಬಾನು, ಇರ್ಫಾನ್, ಸಿರಾಜ್,ವಿನಯ್, ಮಧು ಕುಮಾರ್, ಸ್ಥಳೀಯರಾದ ದಿಲ್ದಾರ್ ಬೇಗಂ, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಸುಬ್ರಮಣ್ಯ, ಕುಂಜಿಮೋಣು, ಪೋಲ್ಸನ್, ಶಿವರಾಮ್ ಶೆಟ್ಟಿ, ಅಜೀದ್, ಸಿದ್ದೀಕ್,ಗೋಪಾಲ ಚಾರ್, ವಿಕ್ರಂ ಗೌಡ, ಸತೀಶ್ ಗೌಡ, ಮೆಲ್ವಿನ್,ಉಮ್ಮಾರ್, ಹೊಸಕೆರೆ ರಮೇಶ್,ಸಬ್ಲಿ ದೇವರಾಜ್,ದೇವಪ್ಪ ಜನಪ್ರತಿನಿಧಿಗಳು,ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು