10:16 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Bantwal | ಸುಜೀರು: ಪ್ರಿಯತಮೆಗೆ ಗಂಭೀರ ಹಲ್ಲೆ ನಡೆಸಿದ ಪ್ರೇಮಿ ನೇಣಿಗೆ ಶರಣು: 8 ವರ್ಷಗಳ ಪ್ರೀತಿಗೆ ತೆರೆ

07/07/2025, 19:54

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಪ್ರೇಮಿಯೊಬ್ಬ ಪ್ರಿಯತಮೆಗೆ ಹಲ್ಲೆ ಮಾಡಿ ಬಳಿಕ ನೇಣಿಗೆ ಶರಣಾದ ಘಟನೆ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಎಂಬಲ್ಲಿ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಡ್ಮಾಣ್ ಗ್ರಾಮದ ಕಾಂಜೀಲಕೋಡಿ ನಿವಾಸಿ 30 ವರ್ಷದ ಸುಧೀರ್ ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಯುವತಿ ದಿವ್ಯ ಯಾನೆ ದೀಕ್ಷಿತಾ(26) ಎಂಬಾಕೆಯನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಇವರಿಬ್ಬರು ಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಕೆಲ ತಿಂಗಳುಗಳಿಂದ ಮನಸ್ತಾಪವಿದ್ದು, ಮದುವೆಗೆ ಒತ್ತಾಯಿಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ದಿವ್ಯ ಮೇಲೆ ಮನಬಂದಂತೆ ಥಳಿಸಿದ್ದು, ಯುವತಿ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ‌ ಎಂದು ತಿಳಿದು ಬಂದಿದೆ.
ಗಾಯಾಳು ದಿವ್ಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಯುವಕ ಸುಧೀರ್ ಈ ಹಿಂದೆ ಕೂಡ ಟವರ್ ಹತ್ತಿ ಈಕೆಯನ್ನು ಹೆದರಿಸಿದ್ದ ಅನ್ನುವ ಮಾಹಿತಿ ಇದೆ. ಸದ್ಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು