10:40 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳ ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಉದ್ಘಾಟನೆ

04/12/2025, 20:28

ಬಂಟ್ವಾಳ(reporterkarnataka.com): ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವನ್ನು ವಿದ್ಯಾ ಸಂಸ್ಥೆಯು ಮಾಡುತ್ತಿದೆ. ಉತ್ತಮ ಗುರಿಯನ್ನು ಇಟ್ಟುಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ಕಲೆಯಲ್ಲಿ ಅಥವಾ ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಬೇಕು ಎಂದು ಸ್ವರ್ಣೋದ್ಯಮಿ ಬಿ.ಸುರೇಶ್ ಬಾಳಿಗ ಹೇಳಿದರು.
ಅವರು ಬಂಟ್ವಾಳ ಎಸ್.ವಿ.ಎಸ್. ದೇವಳ ವಿದ್ಯಾಸಂಸ್ಥೆಗಳ ಸಂಚಾಲಕರಾಗಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜು ಬೆಂಜನಪದವಿನ ಎಮ್.ಡಿ. ಪ್ರೊ. ಸುಷ್ಮಾ ಮುಖ್ಯ ಅತಿಥಿಯಾಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಯಾಶೀಲರಾಗಿದ್ದು ಕಲಿಕೆಯಲ್ಲಿ ಬುದ್ದಿವಂತಿಕೆಯಿಂದ ತೊಡಗಿಸಿಕೊಳ್ಳಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿ ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ. ಆನಂದ ಭಟ್ ವಿದ್ಯಾರ್ಥಿಗಳ ಸಾಧನೆಗೆ ಶುಭಹಾರೈಸಿ ಮಾತನಾಡಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ವೆಂಕಟ್ರಮಣ ಶೆಣೈ , ಬಿ. ಶಿವಾನಂದ ಬಾಳಿಗ ,ಎಸ್ ಸುಬ್ರಾಯ ನಾಯಕ್ , ವಸಂತ ಮಲ್ಯ, ಶ್ರೀನಿವಾಸ ಪೈ, ಗಿರೀಶ್ ಪೈ, ಬಾಮಿ ಲಕ್ಷö್ಮಣ ಶೆಣೈ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಮನೋಜ್ ಕುಮಾರ್ , ಉಪಾಧ್ಯಕ್ಷ ಜಗದೀಶ್ , ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ, ಮುಖ್ಯ ಶಿಕ್ಷಕಿ ರೋಶ್ನಿ ತಾರಾ ಡಿಸೋಜ, ಸಹ ಮುಖ್ಯ ಶಿಕ್ಷಕಿ ಜಾನಕಿ ರಾಜೇಶ್ ಉಪಸ್ಥಿತರಿದ್ದರು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಅತಿಥಿಗಳು ನೆರವೇರಿಸಿದರು. ಬಳಿಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು. ಕಲಿಕೆಯಲ್ಲಿ ವಿಶೇಷ ಸಾಧನೆ ಮಾಡಿದ ಮತ್ತು ಕ್ರೀಡಾ ಮತ್ತು ಸಾಂಸ್ಕೃತಿಕ ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬೆಂಕಿಯಿಲ್ಲದೆ ಅಡುಗೆ ಮಾಡುವ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ತಂಡಗಳಿಗೆ ಬಹುಮಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು