10:28 PM Saturday20 - September 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಕಮ್ಯುನಿಸ್ಟ್ ಚಳುವಳಿಯ ಪರಂಪರೆ ಮತ್ತೆ ಮರುಕಳಿಸಲಿದೆ: ಕೆ.ಯಾದವ ಶೆಟ್ಟಿ

13/02/2023, 00:39

ಬಂಟ್ವಾಳ(reporterlarnataka.com):
ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ರೈತ ಕಾರ್ಮಿಕರ ಹೋರಾಟ ಬಂಟ್ವಾಳದಲ್ಲಿ ಪ್ರಭಾವಶಾಲಿಯಾಗಿದ್ದು ದುಡಿಯುವ ವರ್ಗದ ಆಶಾ ಕಿರಣವಾಗಿ ಮೂಡಿಬಂದಿತ್ತು. ಬಳಿಕ ಭೂ ಸುಧಾರಣೆ ಕಾನೂನಿನ ಜಾರಿಗಾಗಿ ನಡೆದ ಸಮರಶೀಲ ಹೋರಾಟ ಬಂಟ್ವಾಳದಲ್ಲಿ ತನ್ನದೇ ಛಾಪನ್ನು ಮೂಡಿಸಿತು. ವಿವಿಧ ವಿಭಾಗದ ಕಾರ್ಮಿಕರಿಗೆ ನ್ಯಾಯ ಒದಗಿಸುವಲ್ಲಿಯೂ ಕಮ್ಯುನಿಸ್ಟರ ಪಾತ್ರವಿದೆ. ಒಟ್ಟಿನಲ್ಲಿ ಸಮಾಜದ ಅಭಿವೃದ್ಧಿಯಲ್ಲಿ ಕೆಂಬಾವುಟದ ಪಾತ್ರವಿದ್ದು,ಅಂತಹ ಕಮ್ಯುನಿಸ್ಟ್ ಚಳುವಳಿಯ ಪರಂಪರೆಯನ್ನು ಮತ್ತೆ ಮರುಕಳಿಸುವಂತಾಗಲು ದುಡಿಯುವ ವರ್ಗದ ಚಟುವಟಿಕೆಗಳು ಬಂಟ್ವಾಳ ತಾಲೂಕಿನಾದ್ಯಂತ ವಿಸ್ತಾರವಾಗಿ ಬೆಳೆಯಬೇಕು. ಅಂತಹ ಚಟುವಟಿಕೆಗಳಿಗೆ ಕೇಂದ್ರ ಸ್ಥಳವಾಗಿ ಸಿಪಿಎಂ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸಿಪಿಎಂ ದ. ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಆಶಯ ವ್ಯಕ್ತಪಡಿಸಿದರು.
ಅವರು ಬಿ.ಸಿ. ರೋಡ್ ನಲ್ಲಿ ನೂತನ ಸಿಪಿಎಂ ಬಂಟ್ವಾಳ ತಾಲೂಕು ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ. ಬಾಲಕೃಷ್ಣ ಶೆಟ್ಟಿ ಹಾಗೂ ಸುಕುಮಾರ್ ಅವರು ಮಾತನಾಡಿ, ಜನಸಾಮಾನ್ಯರ ಬದುಕಿನ ಬಗ್ಗೆ ಸದಾ ಚಿಂತಿಸಿ ಜನಪರ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸಲು ದೇಶದ ಸೌಹಾರ್ದತಾ ಪರಂಪರೆಯನ್ನು ಉಳಿಸಲು ಶ್ರಮಿಸುತ್ತಿರುವ ಸಿಪಿಎಂ ಪಕ್ಷ ಮಾತ್ರವೇ ದೇಶಕ್ಕೆ ಭವಿಷ್ಯ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಕೃಷ್ಣಪ್ಪ ಕೊಂಚಾಡಿ ಅವರು ಮಾತನಾಡುತ್ತಾ, ಸಮಸ್ತ ಮಾನವ ಕುಲದ ಏಳಿಗೆಗಾಗಿ ಶ್ರಮಿಸುವ ಕಮ್ಯುನಿಸ್ಟ್ ಸಿದ್ಧಾಂತದಿಂದ ಮಾತ್ರವೇ ಶೋಷಿತ ಸಮುದಾಯದ ದೀನ ದಲಿತರ ಉದ್ದಾರ ಮಾಡಲು ಸಾಧ್ಯ.ದೇಶದ ಆಳುವ ವರ್ಗ ಕೋಮುವಾದ ಕಾರ್ಪೊರೇಟ್ ಮಿಶ್ರಣದಿಂದ ದೇಶದ ಸಂಪತ್ತನ್ನು ದೋಚುತ್ತಿದೆ.ಅಂತಹ ವಂಚಕರಿಂದ ದೇಶವನ್ನು ಉಳಿಸಬೇಕಾದರೆ ಕಮ್ಯುನಿಸ್ಟ್ ಚಳುವಳಿಯನ್ನು ವಿಸ್ತಾರವಾಗಿ ಬೆಳೆಸುವುದು ಒಂದೇ ದಾರಿ ಎಂದು ಪ್ರತಿಪಾದಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಎಂಪಿ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕಾರ್ಮಿಕ ವರ್ಗದ ಧ್ವನಿಯಾದ ಸಿಪಿಎಂ ಬಂಟ್ವಾಳದಲ್ಲಿ ನಡೆಸಿದ ಹೋರಾಟಗಳನ್ನು ಮೆಲುಕು ಹಾಕುತ್ತಾ ಭವಿಷ್ಯದ ದಿನಗಳಲ್ಲಿ ಚಳುವಳಿ ಮುನ್ನಡೆಸಲು ಇರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.


ವೇದಿಕೆಯಲ್ಲಿ ಸಿಪಿಎಂ ಹಿರಿಯ ನಾಯಕರಾದ ಬಿ ವಾಸು ಗಟ್ಟಿ, ಸಂಜೀವ ಬಂಗೇರ, ಮೋನಪ್ಪ ಸಪಲ್ಯ,ನಾರಾಯಣ ಬಡಕಬೈಲ್ ಉಪಸ್ಥಿತರಿದ್ದರು. ಜಿಲ್ಲೆಯ ಕಾರ್ಮಿಕ ಮುಖಂಡರಾದ ಬಿ ಎಂ ಭಟ್ ರವರು ಶುಭಕೋರಿ ಮಾತನಾಡಿದರು.
ಸಮಾರಂಭದಲ್ಲಿ ಸಿಪಿಎಂ ಹಿರಿಯ ನಾಯಕರಾದ ಸುಂದರ ಶೆಟ್ಟಿ ಮೂಡಬಿದ್ರಿ, ಸಿಪಿಎಂ ಬಂಟ್ವಾಳ ತಾಲೂಕು ನಾಯಕರಾದ ಉದಯ ಕುಮಾರ್,ಜನಾರ್ಧನ, ಲೋಲಾಕ್ಷಿ,ಚಂದ್ರ ಪೂಜಾರಿ, ಯುವಜನ ನಾಯಕರಾದ ಅಮೀರ್,ಅಮನ್ ,ಕಾರ್ಮಿಕ ನಾಯಕರಾದ ವಿಮಲ, ನಾರಾಯಣ ಮುಂತಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು