5:56 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬಂಟ್ವಾಳ: 187 ಪ್ರಿಸೈಡಿಂಗ್ ಆಫೀಸರ್ ಸೇರಿದಂತೆ 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

21/04/2023, 20:30

ಬಂಟ್ವಾಳ(reporterkarnataka.com):
ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
22 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿಯವರು, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರಾದ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್.ಬಿ.ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್., ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ., ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಜೇಶ್ ನಾಯ್ಕ್ ಎನ್.ಎಮ್,ವಿಜಯ ವಿಕ್ರಮ್ ಚುನಾವಣಾ ಕರ್ತವ್ಯ ನಿರತ ಕಂದಾಯ ಇಲಾಖೆ, ಸರ್ವೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ತರಬೇತಿ ಪಡೆದ ಅಧಿಕಾರಿಗಳಿಗೆ ಈ ಬಗ್ಗೆ ಪರೀಕ್ಷೆ ನಡೆಸಿ ತರಬೇತಿ ಮಟ್ಟವನ್ನು ಪರಿಶೀಲಿಸಲಾಯಿತು. ತರಬೇತಿ ಪಡೆದ ಬಗ್ಗೆ ಮತಗಟ್ಟೆ ಅಧಿಕಾರಿಗಳು ಸಂತೃಪ್ತಿ ಹಾಗೂ ಮತದಾನದ ಕಾರ್ಯ ನಡೆಸಿಕೊಡಲು ಸಿದ್ಧವಿರುವ ಬಗ್ಗೆ ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು