5:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ: 187 ಪ್ರಿಸೈಡಿಂಗ್ ಆಫೀಸರ್ ಸೇರಿದಂತೆ 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

21/04/2023, 20:30

ಬಂಟ್ವಾಳ(reporterkarnataka.com):
ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
22 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿಯವರು, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರಾದ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್.ಬಿ.ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್., ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ., ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಜೇಶ್ ನಾಯ್ಕ್ ಎನ್.ಎಮ್,ವಿಜಯ ವಿಕ್ರಮ್ ಚುನಾವಣಾ ಕರ್ತವ್ಯ ನಿರತ ಕಂದಾಯ ಇಲಾಖೆ, ಸರ್ವೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ತರಬೇತಿ ಪಡೆದ ಅಧಿಕಾರಿಗಳಿಗೆ ಈ ಬಗ್ಗೆ ಪರೀಕ್ಷೆ ನಡೆಸಿ ತರಬೇತಿ ಮಟ್ಟವನ್ನು ಪರಿಶೀಲಿಸಲಾಯಿತು. ತರಬೇತಿ ಪಡೆದ ಬಗ್ಗೆ ಮತಗಟ್ಟೆ ಅಧಿಕಾರಿಗಳು ಸಂತೃಪ್ತಿ ಹಾಗೂ ಮತದಾನದ ಕಾರ್ಯ ನಡೆಸಿಕೊಡಲು ಸಿದ್ಧವಿರುವ ಬಗ್ಗೆ ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು