10:46 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಬಂಟ್ವಾಳ: 187 ಪ್ರಿಸೈಡಿಂಗ್ ಆಫೀಸರ್ ಸೇರಿದಂತೆ 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

21/04/2023, 20:30

ಬಂಟ್ವಾಳ(reporterkarnataka.com):
ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
22 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿಯವರು, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರಾದ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್.ಬಿ.ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್., ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ., ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಜೇಶ್ ನಾಯ್ಕ್ ಎನ್.ಎಮ್,ವಿಜಯ ವಿಕ್ರಮ್ ಚುನಾವಣಾ ಕರ್ತವ್ಯ ನಿರತ ಕಂದಾಯ ಇಲಾಖೆ, ಸರ್ವೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ತರಬೇತಿ ಪಡೆದ ಅಧಿಕಾರಿಗಳಿಗೆ ಈ ಬಗ್ಗೆ ಪರೀಕ್ಷೆ ನಡೆಸಿ ತರಬೇತಿ ಮಟ್ಟವನ್ನು ಪರಿಶೀಲಿಸಲಾಯಿತು. ತರಬೇತಿ ಪಡೆದ ಬಗ್ಗೆ ಮತಗಟ್ಟೆ ಅಧಿಕಾರಿಗಳು ಸಂತೃಪ್ತಿ ಹಾಗೂ ಮತದಾನದ ಕಾರ್ಯ ನಡೆಸಿಕೊಡಲು ಸಿದ್ಧವಿರುವ ಬಗ್ಗೆ ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು