1:08 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಬಂಟ್ವಾಳ: ಚೆನ್ನೈತ್ತೋಡಿ ಬಳಿ ಅಂಗಡಿಗೆ ನುಗ್ಗಿದ ಕಾರು; ಗಂಭೀರ ಗಾಯಗೊಂಡ ವೃದ್ದ ಮಹಿಳೆ ಸಾವು

25/02/2025, 13:31

ಮಂಗಳೂರು(reporterkarnataka.com): ಕಾರೊಂದು ಅಂಗಡಿಗೆ ನುಗ್ಗಿದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪರಿಣಾಮ ವಾಮದಪದವು ನಿವಾಸಿ ಸುಮತಿ(91) ಎಂಬವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.


ವೇಗವಾಗಿ ಬಂದ ಕಾರು ಗ್ರಾಹಕ‌ ಹಾಗೂ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ವೃದ್ದೆ ಸುಮತಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ಅಂಗಡಿ ಮುಂದೆ ಕೂತಿದ್ದ ವೃದ್ಧೆ ಸುಮತಿ ಅವರಿಗೆ ಡಿಕ್ಕಿ ಹೊಡೆದಿದೆ.
ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು