5:40 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಬಂಟ್ವಾಳ: ಆಟೋರಿಕ್ಷಾ- ಬೈಕ್ ಮುಖಾಮುಖಿ ಡಿಕ್ಕಿ: 4 ಮಂದಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

30/05/2023, 18:57

ಬಂಟ್ವಾಳ(reporterkarnataka.com): ಅಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಭಂಡಾರಿ ಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ.
ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಜೊಸ್ಟಿಲಿನ್ ಡಿಸೋಜ, ಸಹ ಸವಾರ ರಶ್ಮಿತ್ ಗಾಯಗೊಂಡಿದ್ದಾರೆ
ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಭಂಡಾರಿಬೆಟ್ಟು ಎಂಬಲ್ಲಿ ರಿಕ್ಷಾ ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ. ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಮೂರ್ತಿ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು