6:00 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

23/08/2021, 09:49

ಬಂಟ್ವಾಳ(reporterkarnataka.com):

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿತು.

ಜೈ ತುಲುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಾಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ್ ಅವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಚೇತನ್ ಮುಂಡಾಜೆ ಮಾತನಾಡಿ, ತುಲು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ. ತುಲು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. 

ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು