10:15 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

23/08/2021, 09:49

ಬಂಟ್ವಾಳ(reporterkarnataka.com):

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿತು.

ಜೈ ತುಲುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಾಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ್ ಅವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಚೇತನ್ ಮುಂಡಾಜೆ ಮಾತನಾಡಿ, ತುಲು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ. ತುಲು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. 

ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು