7:50 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

‌‌‌‌‌‌‌ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ

30/04/2023, 21:19

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು

ಬಂಟ್ವಾಳ(reporterkarnataka.com):
ಮೊಡಂಕಾಪು ‌‌‌‌‌‌‌‌ಕಾರ್ಮೆಲ್ ಕಾಲೇಜ್‌ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋಡ್ ವರೆಗೆ ನಡೆಸಲಾಯಿತು.
ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಕುಮಾರ್ ಚಾಲನೆ ನೀಡಿದರು.
ಅವರು ಮಾತನಾಡಿ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಇದರಿಂದ ಮಾತ್ರ ಮತದಾನದ ಉದ್ದೇಶದ ಸಾಕಾರಗೊಳ್ಳಲು ಸಾಧ್ಯ ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಕಾರ್ಯತತ್ಪರವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಚುನಾವಣಾ ಮಂಡಳಿ, ಬಂಟ್ವಾಳ ತಾಲೂಕು ಆಡಳಿತ ಸಿಬ್ಬಂದಿಗಳು,ಬಂಟ್ವಾಳ ನಗರಸಭೆ, ಬಂಟ್ವಾಳ ಪುರಸಭೆ, ಬಂಟ್ವಾಳದ ಅಧಿಕಾರಿ ವರ್ಗದವರು ಮತ್ತು ಮಂಗಳೂರು ವಿಶ್ವವಿದ್ಯಾ ನಿಲಯದ ಎನ್ ಎಸ್ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಕಾಲೇಜಿನ ಪ್ರಾಂಶುಪಾಲೆ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್, ಯೋಜನಾಧಿಕಾರಿ ಕೀರ್ತನ್, ಸಹಯೋಜನಾಧಿಕಾರಿ ವಿಜೇತ ಹಾಗೂ ಉಪನ್ಯಾಸಕರಾದ ಸುಪ್ರೀತ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮದ ಕೊನೆಗೆ ಕಾಲೇಜಿನ ಘಟಕದ ಸ್ವಯಂಸೇವಕರಿಂದ ಮತ ದಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು