10:42 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

‌‌‌‌‌‌‌ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ

30/04/2023, 21:19

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು

ಬಂಟ್ವಾಳ(reporterkarnataka.com):
ಮೊಡಂಕಾಪು ‌‌‌‌‌‌‌‌ಕಾರ್ಮೆಲ್ ಕಾಲೇಜ್‌ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋಡ್ ವರೆಗೆ ನಡೆಸಲಾಯಿತು.
ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಕುಮಾರ್ ಚಾಲನೆ ನೀಡಿದರು.
ಅವರು ಮಾತನಾಡಿ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಇದರಿಂದ ಮಾತ್ರ ಮತದಾನದ ಉದ್ದೇಶದ ಸಾಕಾರಗೊಳ್ಳಲು ಸಾಧ್ಯ ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಕಾರ್ಯತತ್ಪರವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಚುನಾವಣಾ ಮಂಡಳಿ, ಬಂಟ್ವಾಳ ತಾಲೂಕು ಆಡಳಿತ ಸಿಬ್ಬಂದಿಗಳು,ಬಂಟ್ವಾಳ ನಗರಸಭೆ, ಬಂಟ್ವಾಳ ಪುರಸಭೆ, ಬಂಟ್ವಾಳದ ಅಧಿಕಾರಿ ವರ್ಗದವರು ಮತ್ತು ಮಂಗಳೂರು ವಿಶ್ವವಿದ್ಯಾ ನಿಲಯದ ಎನ್ ಎಸ್ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಕಾಲೇಜಿನ ಪ್ರಾಂಶುಪಾಲೆ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್, ಯೋಜನಾಧಿಕಾರಿ ಕೀರ್ತನ್, ಸಹಯೋಜನಾಧಿಕಾರಿ ವಿಜೇತ ಹಾಗೂ ಉಪನ್ಯಾಸಕರಾದ ಸುಪ್ರೀತ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮದ ಕೊನೆಗೆ ಕಾಲೇಜಿನ ಘಟಕದ ಸ್ವಯಂಸೇವಕರಿಂದ ಮತ ದಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು