12:21 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

‌‌‌‌‌‌‌ಬಂಟ್ವಾಳ ಕಾರ್ಮೆಲ್ ಕಾಲೇಜು ಎನ್ನೆಸ್ಸೆಸ್ ಘಟಕದಿಂದ ಮತದಾರರ ಜಾಗೃತಿ ಕಾರ್ಯಕ್ರಮ; ಬೀದಿ ನಾಟಕ ಪ್ರದರ್ಶನ

30/04/2023, 21:19

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು

ಬಂಟ್ವಾಳ(reporterkarnataka.com):
ಮೊಡಂಕಾಪು ‌‌‌‌‌‌‌‌ಕಾರ್ಮೆಲ್ ಕಾಲೇಜ್‌ನ ರಾಷ್ಟ್ರೀಯ ಸೇವಾಯೋಜನಾ ಘಟಕ ಮತ್ತು ದಕ್ಷಿಣ ಕನ್ನಡ ಸ್ವೀಪ್ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಅರಿವು ಜಾಥವನ್ನು ಕೈಕಂಬ ದಿಂದ ಬಿಸಿರೋಡ್ ವರೆಗೆ ನಡೆಸಲಾಯಿತು.
ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಕುಮಾರ್ ಚಾಲನೆ ನೀಡಿದರು.
ಅವರು ಮಾತನಾಡಿ ಪ್ರತಿಯೊಬ್ಬರೂ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಇದರಿಂದ ಮಾತ್ರ ಮತದಾನದ ಉದ್ದೇಶದ ಸಾಕಾರಗೊಳ್ಳಲು ಸಾಧ್ಯ ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಕಾರ್ಯತತ್ಪರವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಚುನಾವಣಾ ಮಂಡಳಿ, ಬಂಟ್ವಾಳ ತಾಲೂಕು ಆಡಳಿತ ಸಿಬ್ಬಂದಿಗಳು,ಬಂಟ್ವಾಳ ನಗರಸಭೆ, ಬಂಟ್ವಾಳ ಪುರಸಭೆ, ಬಂಟ್ವಾಳದ ಅಧಿಕಾರಿ ವರ್ಗದವರು ಮತ್ತು ಮಂಗಳೂರು ವಿಶ್ವವಿದ್ಯಾ ನಿಲಯದ ಎನ್ ಎಸ್ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಕಾಲೇಜಿನ ಪ್ರಾಂಶುಪಾಲೆ ಡಾ.ಸಿಸ್ಟರ್ ಲತಾ ಫೆರ್ನಾಂಡಿಸ್, ಯೋಜನಾಧಿಕಾರಿ ಕೀರ್ತನ್, ಸಹಯೋಜನಾಧಿಕಾರಿ ವಿಜೇತ ಹಾಗೂ ಉಪನ್ಯಾಸಕರಾದ ಸುಪ್ರೀತ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮದ ಕೊನೆಗೆ ಕಾಲೇಜಿನ ಘಟಕದ ಸ್ವಯಂಸೇವಕರಿಂದ ಮತ ದಾನದ ಕುರಿತು ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು