6:38 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು