4:55 PM Sunday30 - June 2024
ಬ್ರೇಕಿಂಗ್ ನ್ಯೂಸ್
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ… ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು