8:32 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು