5:53 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಬಿರುಸಿನ ಮಳೆಗೆ ವ್ಯಾಪಕ ಅನಾಹುತ: ನೆಟ್ಲ, ಪುದು, ಕೆದಿಲದಲ್ಲಿ ಮರ ಬಿದ್ದು ಮನೆಗೆ ಹಾನಿ; ರಸ್ತೆ ಸಂಚಾರಕ್ಕೆ ಅಡ್ಡಿ

27/06/2024, 11:38

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಅವ್ಯಾಹತ ಬಿರುಸಿನ ಮಳೆಯಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಹಲವು ಮನೆಗಳು ಸಹಿತ ವ್ಯಾಪಕ ಹಾನಿಯುಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.


ಕೆಲವು ಕಡೆ ರಸ್ತೆಗೆ ಮರಗಳು ಬಿದ್ದು ಸಂಚಾರ ಅಡ್ಡಿ ಉಂಟಾಗಿತ್ತು. ಮನೆಗಳ ಮೇಲೂ ಮರಗಳು ಬಿದ್ದು ಹಾನಿ ಉಂಟಾಗಿದೆ. ತಡೆಗೋಡೆಗಳು ಉರುಳಿ ಬಿದ್ದು ನಷ್ಟ ಸಂಭವಿಸಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿ ಅವರ ವಾಸ್ತವ್ಯದ ಮನೆ ಮೇಲೆ ಅಶ್ವತ್ಥ ಮರ ಬಿದ್ದು ಮನೆ ಹಾಗೂ ಆವರಣ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ. ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಬತ್ತದ ಗದ್ದೆಯಲ್ಲಿ ಮಳೆ ನೀರು ನಿಂತು ನಷ್ಟವಾಗಿದೆ. ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ರಾಮಚಂದ್ರ ಅವರ ಮನೆ ಬದಿಗೆ ಮಣ್ಣು ಜರಿದು ಬಿದ್ದು ಶೌಚಾಲಯದ ಗುಂಡಿ ಮುಚ್ಚಿದೆ. ಪುದು ಗ್ರಾಮದ ಕೆಸನಮೊಗರು ಬಾಬು ಸಪಲ್ಯ ಎಂಬವರ ಮನೆ ಮೇಲೆ ಮರಬಿದ್ದು ಗೋಡೆ ಬಿದ್ದು ಮಾಡಿನ ಹಂಚು ಹುಡಿಯಾಗಿದೆ. ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು ನಿವಾಸಿ ಬ್ರಿಜಿತ್ ಡಿಕೋಸ್ಟ ಅವರ ವಾಸ್ತವ್ಯದ ಮನೆಗೆ ತಾಗಿರುವ ಹಟ್ಟಿಗೆ ಹಾನಿಯಾಗಿರುತ್ತದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಭಾಸ್ಕರ ಅವರ ಮನೆಯ ಆವರಣಗೋಡೆ ಕುಸಿದು ನಷ್ಟ ಉಂಟಾಗಿದೆ.
ಕೆದಿಲ ಗ್ರಾಮದ ಗಾಂಧಿನಗರ ನಿವಾಸಿ ಪೂವಕ್ಕ ಎಂಬವರ ವಾಸ್ತವ್ಯದ ಮನೆ ಮೇಲೆ ಮರಬಿದ್ದು ಹಾನಿಯಾಗಿರುತ್ತದೆ. ನೆಟ್ಲದ ನಿಟಿಲೇಶ್ವರ ದೇವಸ್ಥಾನದ ಸಮೀಪ ಮರಬಿದ್ದು ಆವರಣಗೋಡೆ ಕುಸಿದಿದೆ . ಇನ್ನೂ ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು