10:55 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ

02/06/2026, 15:33

ಮಾಣಿ(reporterkarnataka.com): ಕಡು ಬಡತನದ ಮಧ್ಯೆಯೂ ಅವಿಭಕ್ತ ಕುಟುಂಬದ ಜವಾಬ್ದಾರಿಯುತ ಯಜಮಾನನಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಯಕ್ಷ ಪ್ರೇಮಿಯಾಗಿ ಬೆಳೆದವರು ತಿಮ್ಮಪ್ಪ ಅವರು ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಶಾಲಾ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಅವರು ಮಾಣಿಯ ಕರ್ನಾಟಕ ಪ್ರೌಢ ಶಾಲೆಯಲ್ಲಿ ಕಳೆದ 40 ವರ್ಷಗಳಿಂದ ಡಿ – ಗ್ರೂಪ್ ನೌಕರನಾಗಿದ್ದು ವಯೋನಿವೃತ್ತಿ ಹೊಂದಿದ ಪಿ. ತಿಮ್ಮಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು.
ಕಳೆದ 20 ವರ್ಷಗಳಿಂದ ಅಡುಗೆ ಸಿಬ್ಬಂದಿಯಾಗಿ ಸೇವೆಗೈದು ನಿವೃತ್ತಿ ಹೊಂದಿದ ಗಂಗಮ್ಮ ಅವರ ಬಗ್ಗೆ ಹಿರಿಯ ಶಿಕ್ಷಕಿ ಶ್ಯಾಮಲಾ ಕೆ. ಮಾತನಾಡುತ್ತಾ ಅತಿ
ಕಡಿಮೆ ಸಂಬಳ ಪಡೆದರೂ ಕೆಲಸದ ಮೇಲಿನ ಶ್ರದ್ಧೆ ಮತ್ತು ವಿದ್ಯಾರ್ಥಿಗಳ ಪ್ರೀತಿಯಿಂದಾಗಿ ಲಾಕ್ ಡೌನ್ ಸಂದರ್ಭದಲ್ಲಿ ಕೂಡ ಕರ್ತವ್ಯ ನಿರ್ವಹಿಸಿ ಬದ್ಧತೆ ಮೆರೆದಿದ್ದಾರೆ ಎಂದು ಕೊಂಡಾಡಿದರು.
ಇದೇ ಸಂದರ್ಭ ಸುಮಾರು 10 ವರ್ಷಗಳಿಂದ ಗೌರವ ಶಿಕ್ಷಕಿಯಾಗಿ ಸೇವೆಗೈದ ಸುಶ್ಮಿತಾ ಎ.ವಿ. ಅವರನ್ನು ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಕೆ. ಇಬ್ರಾಹಿಂ, ಗ್ರಾಪಂ ಪಿಡಿಓ ಗಿರಿಜಾ, ನಿವೃತ್ತ ಶಿಕ್ಷಕರುಗಳಾದ ಬಿ.ಕೆ. ಭಂಡಾರಿ, ಪಿ. ಗಂಗಾಧರ ರೈ.ಎಂ. ಕೆ. ಬಾಲಕೃಷ್ಣ, ಐ. ಜಯಲಕ್ಷ್ಮಿ , ಕೃಷ್ಣಪ್ಪ ನಾಯ್ಕ, Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಜಯಾನಂದ ಪೆರಾಜೆ ಶುಭಹಾರೈಸಿದರು.
ಮುಖ್ಯ ಶಿಕ್ಷಕ ಎಸ್ . ಚೆನ್ನಪ್ಪ ಗೌಡ ಸ್ವಾಗತಿಸಿದರು. ಹಿರಿಯ ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿದರು‌. ಹಿಂದಿ ಶಿಕ್ಷಕ ಜಯರಾಮ ಕಾಂಚನ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರತಿಮಾ ಮತ್ತು ಅಭಿಲಾಷ್ ಕುಮಾರ್ ಜಿ. ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು