3:09 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಬಂಟ್ವಾಳ ಫೈ ಓವರ್ ಅಡಿಯಲ್ಲಿ ಅನಾಥ ಕಾರು ಪತ್ತೆ: ‘ಸ್ಯಾಂಟ್ರೋ ರವಿ’ಗೆ ಸೇರಿದ್ದು ಎಂಬ ಶಂಕೆ

19/01/2023, 14:31

ಬಂಟ್ವಾಳ :reporterkarnataka.com: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.

ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ದಿಯಾಗಿತ್ತು.

ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ದಾಖಲೆಗಳಿವೆ.

ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ.

ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 Dow ಬರೆಯಲಾಗಿದೆ.

ಒನ್ನಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ. ಸ್ಥಳೀಯ ಅಂಗಡಿ ಮಾಲಕರಿಗೆ ಈ ಕಾರಿನ ಬಗ್ಗೆ ಸಾಕಷ್ಟು ಸಂದೇಹಗಳು ಮೂಡಿದ್ದು, ಸ್ಯಾಂಟ್ರೋ ರವಿ ಇಲ್ಲಿ ಕಾರು ಇಟ್ಟು ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಪೊಲೀಸರು ಈಗಾಗಲೇ ಕಾರನ್ನು ಪರಿಶೀಲನೆ ಮಾಡಿದ್ದು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು