10:36 PM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬಂಟ್ವಾಳ ಫೈ ಓವರ್ ಅಡಿಯಲ್ಲಿ ಅನಾಥ ಕಾರು ಪತ್ತೆ: ‘ಸ್ಯಾಂಟ್ರೋ ರವಿ’ಗೆ ಸೇರಿದ್ದು ಎಂಬ ಶಂಕೆ

19/01/2023, 14:31

ಬಂಟ್ವಾಳ :reporterkarnataka.com: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.

ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ದಿಯಾಗಿತ್ತು.

ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ದಾಖಲೆಗಳಿವೆ.

ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ.

ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 Dow ಬರೆಯಲಾಗಿದೆ.

ಒನ್ನಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ. ಸ್ಥಳೀಯ ಅಂಗಡಿ ಮಾಲಕರಿಗೆ ಈ ಕಾರಿನ ಬಗ್ಗೆ ಸಾಕಷ್ಟು ಸಂದೇಹಗಳು ಮೂಡಿದ್ದು, ಸ್ಯಾಂಟ್ರೋ ರವಿ ಇಲ್ಲಿ ಕಾರು ಇಟ್ಟು ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಪೊಲೀಸರು ಈಗಾಗಲೇ ಕಾರನ್ನು ಪರಿಶೀಲನೆ ಮಾಡಿದ್ದು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು