8:30 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ ಫೈ ಓವರ್ ಅಡಿಯಲ್ಲಿ ಅನಾಥ ಕಾರು ಪತ್ತೆ: ‘ಸ್ಯಾಂಟ್ರೋ ರವಿ’ಗೆ ಸೇರಿದ್ದು ಎಂಬ ಶಂಕೆ

19/01/2023, 14:31

ಬಂಟ್ವಾಳ :reporterkarnataka.com: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.

ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ದಿಯಾಗಿತ್ತು.

ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ದಾಖಲೆಗಳಿವೆ.

ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ.

ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 Dow ಬರೆಯಲಾಗಿದೆ.

ಒನ್ನಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ. ಸ್ಥಳೀಯ ಅಂಗಡಿ ಮಾಲಕರಿಗೆ ಈ ಕಾರಿನ ಬಗ್ಗೆ ಸಾಕಷ್ಟು ಸಂದೇಹಗಳು ಮೂಡಿದ್ದು, ಸ್ಯಾಂಟ್ರೋ ರವಿ ಇಲ್ಲಿ ಕಾರು ಇಟ್ಟು ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಪೊಲೀಸರು ಈಗಾಗಲೇ ಕಾರನ್ನು ಪರಿಶೀಲನೆ ಮಾಡಿದ್ದು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು