3:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬಂಟ್ವಾಳ ಫೈ ಓವರ್ ಅಡಿಯಲ್ಲಿ ಅನಾಥ ಕಾರು ಪತ್ತೆ: ‘ಸ್ಯಾಂಟ್ರೋ ರವಿ’ಗೆ ಸೇರಿದ್ದು ಎಂಬ ಶಂಕೆ

19/01/2023, 14:31

ಬಂಟ್ವಾಳ :reporterkarnataka.com: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.

ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಫೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ದಿಯಾಗಿತ್ತು.

ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ದಾಖಲೆಗಳಿವೆ.

ಕೆ.ಎಲ್.14 ವೈ.8999 ನಂ.ಕಾರು ಕೇರಳ ಸರಕಾರದ ಆರ್.ಟಿ.ಒ.ಯಲ್ಲಿ ಬ್ಲ್ಯಾಕ್ ಲಿಸ್ಟ್ ಗೆ ಸೇರಿದೆ.

ನಿಲ್ಲಿಸಲಾಗಿದ್ದ ಕಾರಿನ ಒಳ ಭಾಗದಲ್ಲಿ ಚೀಟಿ ಒಂದನ್ನು ಇಟ್ಟಿದ್ದು, ಸಮೀರ್ ಎಂಬ ಹೆಸರಿನ ಮುಂದೆ 9995333448 Dow ಬರೆಯಲಾಗಿದೆ.

ಒನ್ನಿ ವ್ಯಾಟ್ಸಪ್ ಕಾಲ್ ಎಂದು ಬರೆದಿದ್ದಾರೆ. ಸ್ಥಳೀಯ ಅಂಗಡಿ ಮಾಲಕರಿಗೆ ಈ ಕಾರಿನ ಬಗ್ಗೆ ಸಾಕಷ್ಟು ಸಂದೇಹಗಳು ಮೂಡಿದ್ದು, ಸ್ಯಾಂಟ್ರೋ ರವಿ ಇಲ್ಲಿ ಕಾರು ಇಟ್ಟು ಪರಾರಿಯಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಪೊಲೀಸರು ಈಗಾಗಲೇ ಕಾರನ್ನು ಪರಿಶೀಲನೆ ಮಾಡಿದ್ದು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು