3:22 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಂಟ್ವಾಳ: ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ

30/09/2023, 10:39

ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಬಂಟ್ವಾಳ ಪೋಲಿಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನ ಜಾಗೃತಿ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ಜರುಗಿತು.


ವೇದಿಕೆಯಲ್ಲಿ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಯಾದ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು), ಅನಂತ ಪದ್ಮನಾಭ, (ಆರಕ್ಷಕ ನಿರೀಕ್ಷಕರು ಬಂಟ್ವಾಳ ನಗರ ಪೊಲೀಸ್ ಠಾಣೆ), ರಾಮಕೃಷ್ಣ (ಪಿ ಎಸ್ ಐ ಬಂಟ್ವಾಳ), ಡಾ. ಲತಾ ಫೆರ್ನಾಂಡಿಸ್ ಎ ಸಿ, (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಮೊಡಂಕಾಪು), ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ, ಮಾನವ ಹಕ್ಕುಗಳ ಸಂಯೋಜಕರು ನಿಹಾರಿಕಾ ಶೆಟ್ಟಿ ಉಪಸ್ಥಿತರಿದ್ದರು.
ಹರೇಣಿ ಕುಮಾರಿ ಡಿ. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಅನಂತ ಪದ್ಮನಾಭ ಮಾತಾಡಿ, ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಕ್ಕೆ ಗುರಿಯಾಗದೆ ತಮ್ಮ ಭವಿಷ್ಯದ ಬಗ್ಗೆ ನಿಗಾವಹಿಸಬೇಕೆಂಬ ಸಂದೇಶ ನೀಡಿದರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು