6:05 AM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಬಂಟ್ವಾಳ: ಮದರ್ ವೆರೋನಿಕಾ ದ್ವಿಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರ

04/10/2023, 14:27

ಬಂಟ್ವಾಳ(reporterkarnataka.com): ಅಪೊಸ್ತೋಲಿಕ್ ಕಾರ್ಮೆಲ್ ಸಂಸ್ಥಾಪಕಿ ಮದರ್ ವೆರೋನಿಕಾ ಇವರ ದ್ವಿ ಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರವನ್ನು ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಕಾರ್ಮೆಲ್ ಕಾಲೇಜ್ ಮೊಡಂಕಾಪು , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್, ಮಂಗಳೂರು, ಇನ್ಫ್ಯಾಂಟ್ ಜೀಸಸ್ ಚರ್ಚ್ ಮೊಡಂಕಾಪು, ಕ್ರಿಸ್ಟೊಫರ್ ಅಸೋಸಿಯೇಷನ್, ಆರೋಗ್ಯ ಆಯೋಗ ಇನ್ಫ್ಯಾಂಟ್ ಜೀಸಸ್ ಚರ್ಚ್, ಐಸಿವೈಮ್ ಹಾಗೂ ಸ್ತ್ರೀ ಸಂಘಟನೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾಯಿತು.


ಸಭಾ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳಾಗಿ ಅತೀ ವಂದನೀಯ ವೆಲೇರಿಯನ್ ಡಿ’ಸೋಜ (ಧರ್ಮ ಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್ ಮೊಡಂಕಾಪು), ಚರ್ಚ್ ಪಾಲನ ಮಂಡಳಿಯ ಸುನಿಲ್ ವೇಗಸ್ ಹಾಗೂ ಕಾರ್ಯದರ್ಶಿ ಮನೋಹರ್ ಡಿ’ ಕೊಸ್ತಾ, ಡಾ| ಚಾರು, (ವೈದ್ಯರು ಫಾ| ಮುಲ್ಲರ್ ಆಸ್ಪತ್ರೆ), ಐವನ್ ಡಿ’ಸೋಜ(ಅಧ್ಯಕ್ಷರು ಕ್ರಿಸ್ಟೊಫರ್ ಅಸೋಸಿಯೇಷನ್), ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಸಂಚಾಲಕರಾದ ಏಲೋಶಿಯಸ್ ಹಾಗೂ ಐಸಿವೈಮ್ ನ ಸಂಚಾಲಕಿ ಪ್ರೀಮ, ಕಾರ್ಮೆಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು|ನವೀನ ಎ. ಸಿ. ಮತ್ತು ಡಾ. ಲತಾ ಫೆ ರ್ನಾಂಡಿಸ್ ಎ ಸಿ. (ಪ್ರಾಂಶುಪಾಲರು ಕಾರ್ಮೆಲ್ ಡಿಗ್ರಿ ಕಾಲೇಜ್ ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅತೀ ವಂದನೀಯ
ವೆಲೇರಿಯನ್ ಡಿ’ಸೋಜ ಧರ್ಮ ಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್ ಮೊಡಂಕಾಪು, ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು. ಸಭಾ ಕಾರ್ಯಕ್ರಮದ ನಂತರ ರಕ್ತದಾನ ಶಿಬಿರ ಪ್ರಾರಂಭಗೊಂಡಿತು. 50 ಯುನಿಟ್ ರಕ್ತ ಪಡೆದುಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ನಿರೂಪಣೆಯನ್ನು ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜ್ ಮೊಡಂಕಾಪು) ಮಾಡಿದರು. ರೊಸಿಲ್ಡ್ (ಕಾರ್ಮೆಲ್ ಕಾನ್ವೆಂಟ್ ನ ಸುಪೀರಿಯರ್ ಹಾಗೂ ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾ ಸಂಸ್ಥೆಗಳು) ಸ್ವಾಗತಿಸಿದರು.
ನವೀನ ಎ.ಸಿ (ಪ್ರಾಂಶುಪಾಲರು, ಕಾರ್ಮೆಲ್ ಪದವಿ ಪೂರ್ವ ಕಾಲೇಜು) ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು