12:27 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು