2:25 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು