5:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು