10:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು