6:20 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೊಳ್ನಾಡು, ಮಂಚಿ, ಸಾಲೆತ್ತೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ: ಮತಯಾಚನೆ

19/04/2023, 21:41

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರಿಗೆ ಕಳೆದ 5 ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಬಗ್ಗೆ ತಿಳಿಸಿದ ಅವರು ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಪೂರೈಸಿದೆ ಎಂದು ತಿಳಿಸಿದರು.
ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಂಘರ್ಷವಿಲ್ಲದೆ, ಸರ್ವರಿಗೂ ಸಮಾನವಾದ ರೀತಿಯಲ್ಲಿ ನ್ಯಾಯ ಒದಗಿಸುವ ಆಡಳಿತ ನಡೆಸಿದ್ದೇನೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಜೊತೆ ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬೇಕು.
ನೀವು ನೀಡಿದ ಪ್ರತಿಯೊಂದು ಮತಕ್ಕೂ ಗೌರವ ಸಿಗುವುದರ ಜೊತೆಗೆ , ನಿಮ್ಮ ಧ್ವನಿಯಾಗುತ್ತೇನೆ ಎಂದರು.
ಪ್ರಮುಖರಾದ ಮಾಧವ ಮಾವೆ, ಪುಷ್ಪರಾಜ್ ಚೌಟ, ಶಿವಪ್ರಸಾದ್ ಶೆಟ್ಟಿ, ರಾಜರಾಮ್ ಹೆಗ್ಡೆ ಕುದ್ರಿಯ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಅಭಿಷೇಕ್ ರೈ, ಲೋಹಿತ್ ಕೆಳಗಿನ ಅಗರಿ, ಹರೀಶ್ ಟೈಲರ್, ಪ್ರಶಾಂತ್ ಶೆಟ್ಟಿ ಅಗರಿ, ಸುಧಾಕರ ಕಾಡುಮಠ, ನಾರಾಯಣ ಶೆಟ್ಟಿ ಕುಲ್ಯಾರು, ಶಂಕರ್ ಟೈಲರ್, ಕೃಷ್ಣಪ್ರಸಾದ್ ಶೆಟ್ಟಿ,ಆನಂದ ಪೂಜಾರಿ, ನಾಗರಾಜ ಆಳ್ವ, ಪಾಪಣ್ಣ, ಗಂಗಾಧರ ಆಚಾರ್ಯ, ಮೋಹನ್ ದಾಸ್ ಹೆಗ್ಡೆ, ಪುಷ್ಪಕಾಮತ್, ವಿಜಯ ಪ್ರಭು, ಪ್ರಮೀಳಾ, ಗಣೇಶ್ ಐತಾಳ್, ಕೇಶವ ರಾವ್ ಮಂಚಿ, ಪ್ರಭಾಕರ ರೈ, ಕೃಷ್ಣಪ್ಪ. ಪುಷ್ಪರಾಜ್, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು