1:14 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೊಳ್ನಾಡು, ಮಂಚಿ, ಸಾಲೆತ್ತೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ: ಮತಯಾಚನೆ

19/04/2023, 21:41

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರಿಗೆ ಕಳೆದ 5 ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಬಗ್ಗೆ ತಿಳಿಸಿದ ಅವರು ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಪೂರೈಸಿದೆ ಎಂದು ತಿಳಿಸಿದರು.
ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಂಘರ್ಷವಿಲ್ಲದೆ, ಸರ್ವರಿಗೂ ಸಮಾನವಾದ ರೀತಿಯಲ್ಲಿ ನ್ಯಾಯ ಒದಗಿಸುವ ಆಡಳಿತ ನಡೆಸಿದ್ದೇನೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಜೊತೆ ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬೇಕು.
ನೀವು ನೀಡಿದ ಪ್ರತಿಯೊಂದು ಮತಕ್ಕೂ ಗೌರವ ಸಿಗುವುದರ ಜೊತೆಗೆ , ನಿಮ್ಮ ಧ್ವನಿಯಾಗುತ್ತೇನೆ ಎಂದರು.
ಪ್ರಮುಖರಾದ ಮಾಧವ ಮಾವೆ, ಪುಷ್ಪರಾಜ್ ಚೌಟ, ಶಿವಪ್ರಸಾದ್ ಶೆಟ್ಟಿ, ರಾಜರಾಮ್ ಹೆಗ್ಡೆ ಕುದ್ರಿಯ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಅಭಿಷೇಕ್ ರೈ, ಲೋಹಿತ್ ಕೆಳಗಿನ ಅಗರಿ, ಹರೀಶ್ ಟೈಲರ್, ಪ್ರಶಾಂತ್ ಶೆಟ್ಟಿ ಅಗರಿ, ಸುಧಾಕರ ಕಾಡುಮಠ, ನಾರಾಯಣ ಶೆಟ್ಟಿ ಕುಲ್ಯಾರು, ಶಂಕರ್ ಟೈಲರ್, ಕೃಷ್ಣಪ್ರಸಾದ್ ಶೆಟ್ಟಿ,ಆನಂದ ಪೂಜಾರಿ, ನಾಗರಾಜ ಆಳ್ವ, ಪಾಪಣ್ಣ, ಗಂಗಾಧರ ಆಚಾರ್ಯ, ಮೋಹನ್ ದಾಸ್ ಹೆಗ್ಡೆ, ಪುಷ್ಪಕಾಮತ್, ವಿಜಯ ಪ್ರಭು, ಪ್ರಮೀಳಾ, ಗಣೇಶ್ ಐತಾಳ್, ಕೇಶವ ರಾವ್ ಮಂಚಿ, ಪ್ರಭಾಕರ ರೈ, ಕೃಷ್ಣಪ್ಪ. ಪುಷ್ಪರಾಜ್, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು