3:29 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೊಳ್ನಾಡು, ಮಂಚಿ, ಸಾಲೆತ್ತೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ: ಮತಯಾಚನೆ

19/04/2023, 21:41

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರಿಗೆ ಕಳೆದ 5 ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಲಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಬಗ್ಗೆ ತಿಳಿಸಿದ ಅವರು ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಪೂರೈಸಿದೆ ಎಂದು ತಿಳಿಸಿದರು.
ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಂಘರ್ಷವಿಲ್ಲದೆ, ಸರ್ವರಿಗೂ ಸಮಾನವಾದ ರೀತಿಯಲ್ಲಿ ನ್ಯಾಯ ಒದಗಿಸುವ ಆಡಳಿತ ನಡೆಸಿದ್ದೇನೆ. ಮುಂದಿನ ಅವಧಿಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಜೊತೆ ಶಾಂತಿಯ ಬಂಟ್ವಾಳವನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬೇಕು.
ನೀವು ನೀಡಿದ ಪ್ರತಿಯೊಂದು ಮತಕ್ಕೂ ಗೌರವ ಸಿಗುವುದರ ಜೊತೆಗೆ , ನಿಮ್ಮ ಧ್ವನಿಯಾಗುತ್ತೇನೆ ಎಂದರು.
ಪ್ರಮುಖರಾದ ಮಾಧವ ಮಾವೆ, ಪುಷ್ಪರಾಜ್ ಚೌಟ, ಶಿವಪ್ರಸಾದ್ ಶೆಟ್ಟಿ, ರಾಜರಾಮ್ ಹೆಗ್ಡೆ ಕುದ್ರಿಯ, ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಅಭಿಷೇಕ್ ರೈ, ಲೋಹಿತ್ ಕೆಳಗಿನ ಅಗರಿ, ಹರೀಶ್ ಟೈಲರ್, ಪ್ರಶಾಂತ್ ಶೆಟ್ಟಿ ಅಗರಿ, ಸುಧಾಕರ ಕಾಡುಮಠ, ನಾರಾಯಣ ಶೆಟ್ಟಿ ಕುಲ್ಯಾರು, ಶಂಕರ್ ಟೈಲರ್, ಕೃಷ್ಣಪ್ರಸಾದ್ ಶೆಟ್ಟಿ,ಆನಂದ ಪೂಜಾರಿ, ನಾಗರಾಜ ಆಳ್ವ, ಪಾಪಣ್ಣ, ಗಂಗಾಧರ ಆಚಾರ್ಯ, ಮೋಹನ್ ದಾಸ್ ಹೆಗ್ಡೆ, ಪುಷ್ಪಕಾಮತ್, ವಿಜಯ ಪ್ರಭು, ಪ್ರಮೀಳಾ, ಗಣೇಶ್ ಐತಾಳ್, ಕೇಶವ ರಾವ್ ಮಂಚಿ, ಪ್ರಭಾಕರ ರೈ, ಕೃಷ್ಣಪ್ಪ. ಪುಷ್ಪರಾಜ್, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು