ಇತ್ತೀಚಿನ ಸುದ್ದಿ
ಬಂಟ್ವಾಳ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಣೆ
28/11/2022, 20:52

ಬಂಟ್ವಾಳ(reporterkarnataka.com)
ರಾಷ್ಟ್ರೀಯ ಸೇವಾ ಯೋಜನೆ ಕಾರ್ಮೆಲ್ ಕಾಲೇಜ್ ಮೊಡಂಕಾಪು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬಂಟ್ವಾಳ ನಗರ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಿಸಲಾಯಿತು.
ಬಂಟ್ವಾಳ ನಗರ ಪೊಲೀಸ್ ಠಾಣಾಧಿಕಾರಿ ಕಲೈಮಾರ್ ಪಿ.ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಅವರು ಮಾತನಾಡಿ,ಭಾರತ ಒಂದು ಜಾತ್ಯತೀತ ರಾಷ್ಟ್ರವಾಗಿದೆ, ನಮ್ಮ ದೇಶ ಪ್ರಜಾಪ್ರಭುತ್ವದ ತಳಹದಿಯ ಮೇಲೆ ರೂಪುಗೊಂಡಿದೆ. ನಮ್ಮ ದೇಶವು ಜಾತಿ ಧರ್ಮ ಮತ ಪ್ರಾದೇಶಿಕ ಭೇದ ಭಾವಗಳನ್ನು ಬಿಟ್ಟು ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸುತ್ತದೆ. ಎಂಬ ಸಂದೇಶವನ್ನು ರಾಷ್ಟ್ರೀಯ ಸ್ವಯಂಸೇವಕರಿಗೆ ನೀಡಿದರು.
ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎಸಿ ಪ್ರಾಂಶುಪಾಲರು ಕಾರ್ಮೆಲ್ ಕಾಲೇಜ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರತಿಜ್ಞಾವಿಧಿ ಭೋದಿಸಿದರು.
ತದನಂತರ ಜಾಥವನ್ನು ಹಮ್ಮಿಕೊಳ್ಳಲಾಯಿತು. ಜಾಥದಲ್ಲಿ 50 ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕ, ಸೇವಕಿಯರು ಪಾಲ್ಗೊಂಡಿದ್ದರು. ಕಾರ್ಮೆಲ್ ಕಾಲೇಜ್ ಆವರಣದಿಂದ ಬಿಸಿ ರೋಡಿನವರೆಗೆ ನಡೆದ ಜಾಥ. ಯಶಸ್ವಿಯಾಗಿ ನೆರವೇರಿತು.
ಕನ್ನಡ ಉಪನ್ಯಾಸಕಿ ಸುಪ್ರೀತಾ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕೀರ್ತನ್ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕಿ ಆಸಿಯಾ ವಂದಿಸಿದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.