1:20 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ

04/12/2024, 13:17

ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಕಳದ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರೊಫೆಸನಲ್ ಏಥಿಕ್ಸ್ ನ ಬಗ್ಗೆ ತಮ್ಮ ಅಪಾರ ಅನುಭವ ಮತ್ತು ಹಿರಿತನದ ಅನುಭವಗಳನ್ನು ಸೇರಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷರು ಉಮಾ ಎನ್. ಸೋಮಯಾಜಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿವಕ್ತಾ ಪರಿಷತ್ ನ ಸಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಪರಂಗಿಪೇಟೆ
ಅರ್ಕುಳದ ಮಾತಾ ಲಕ್ಷಣಿ ಶಾಂತಿಧಾಮ ಆಶ್ರಮಕ್ಕೆ 32,000/ ಮೌಲ್ಯದ ಫ್ರಿಜ್ ನ್ನು ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆ ಅವರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಂ. ಕೆ. ವಿಜಯ್ ಕುಮಾರ್ ಅವರನ್ನು ವಕೀಲರ ಸಂಘ (ರಿ) ಬಂಟ್ವಾಳದ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು. ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿ ಅಭ್ಯಾಗತರನ್ನು ಯುವ ವಕೀಲರು ಅದ ಸ್ವರ್ಣ ಗೌರಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಧಿವಕ್ತಾ ಪರಿಷತ್ ನ ಜಿಲ್ಲೆಯ ಸದಸ್ಯರಾದ ವೀರೇಂದ್ರ ಎಂ. ಸಿದ್ದಕಟ್ಟೆ ಧನ್ಯವಾದ ಸಲ್ಲಿಸಿದರು. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು