11:40 PM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬಂಟ್ವಾಳ ಕ್ಷೇತ್ರ: 5 ವರ್ಷದಲ್ಲಿ 2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿ; 1514 ಹೊಸ ರಸ್ತೆ ನಿರ್ಮಾಣ; 34 ಕಿಂಡಿ ಅಣೆಕಟ್ಟು

30/03/2023, 16:45

ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯ ನಡೆದಿದೆ. ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರ ಅಧಿಕಾರಾವಧಿಯ 4 ವರ್ಷ 10 ತಿಂಗಳಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಅಭಿವೃದ್ಧಿ ಕಾಮಗಾರಿ ನಡೆದಿದೆ.
2095.88 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರಾದ್ಯಂತ 1514 ಹೊಸ ರಸ್ತೆಗಳ ನಿರ್ಮಾಣ, 34 ಕಿಂಡಿ ಅಣೆಕಟ್ಟು, 318 ಧಾರ್ಮಿಕ ಕ್ಷೇತ್ರಗಳಿಗೆ ಮೂಲ ಸೌಕರ್ಯ ಮಾತ್ರವಲ್ಲದೆ ಸುಮಾರು 21 ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ.
ಪ್ರಮುಖವಾಗಿ ಕ್ಷೇತ್ರದ ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಲಾಗಿದೆ. 24 ಐಸಿಯು ಬೆಡ್, 7 ಡಯಾಲಿಸಿಸ್ ಘಟಕ ತೆರೆಯಲಾಗಿದೆ. ಇದರಿಂದ ದಿನಕ್ಕೆ 72 ರೋಗಿಗಳಿಗೆ ಉಚಿತ ಡಯಾಸಿಸ್ ಮಾಡಲು ಸಾಧ್ಯವಾಗಿದೆ. ಪುಂಜಾಲಕಟ್ಟೆ ಆಸ್ಪತ್ರೆಯನ್ನು 12.44 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ಬಂಟ್ವಾಳ ತಾಲೂಕು ಆಸ್ಪತ್ರೆ ಹಾಗೂ ವಾಮದಪದವು ಸಮುದಾಯ ಆಸ್ಪತ್ರೆಗೆ 2.40 ಕೋಟಿ ರೂ. ವೆಚ್ಚದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲಾಗಿದೆ. 5 ಕೋಟಿ ರೂ. ವೆಚ್ಚದಲ್ಲಿ ಬಿ.ಸಿ. ರೋಡ್ ನಗರ ಸುಂದರೀಕರಣ ಮಾಡಲಾಗಿದೆ. ಹೀಗೆ ಒಟ್ಟು 2 ಸಾವಿರ ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿ ನಡೆದಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳುತ್ರಾರೆ

ಇತ್ತೀಚಿನ ಸುದ್ದಿ

ಜಾಹೀರಾತು