7:27 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು