5:19 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು