ಇತ್ತೀಚಿನ ಸುದ್ದಿ
ಬಂಟ್ವಾಳ ತಾಲೂಕು ಅಟೋರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷರಾಗಿ ವಿಶ್ವನಾಥ ಚೆಂಡ್ತಿಮಾರ್ ಮತ್ತೆ ಅವಿರೋಧ ಆಯ್ಕೆ
04/12/2023, 20:34

ಬಂಟ್ಚಾಳ(reporterkarnataka.com): ಅಟೋರಿಕ್ಷಾ ಚಾಲಕ- ಮಾಲಕರ(ಬಿಎಂಎಸ್) ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ರಿಕ್ಷಾ ಚಾಲಕ- ಮಾಲಕರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಗೌರವಾಧ್ಯಕ್ಷರಾಗಿ ವಸಂತ ಮಣಿಹಳ್ಳ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ರವಿ ಪಾಣೆಮಂಗಳೂರು ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ತಲೆಂಬಿಲ ಹಾಗೂ ವಿವಿಧ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.