2:49 AM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಸಾನ್ವಿ ಸುವರ್ಣ

29/10/2023, 09:06

ಬಂಟ್ವಾಳ(reporterkarnataka.com):ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೇಶಿವಾಲಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 6 ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿನ 18 ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿರುವರು.
ಸಾನ್ವಿ ಅವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು. ಶಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೊಗ್ರಾಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಹೇಳಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು